ಎ. ಎನ್. ಮೂರ್ತಿರಾವ್ ವ್ಯಕ್ತಿ ಪರಿಚಯ

ಡಾ. ಎ.ಎನ್.ಮೂರ್ತಿ ರಾವ್ (ಅಕ್ಕಿ ಹೆಬ್ಬಾಳು ನರಸಿಂಹಮೂರ್ತಿರಾಯರು)

(ಜೂನ್. ೧೬ ೧೯೦೦ - ೨೪ ಆಗಸ್ಟ್ ೨೦೦೫)-
ಕನ್ನಡದ ಖ್ಯಾತ ವಿಮರ್ಶಕ ಮತ್ತು ಸಾಹಿತಿ. ಬರಿಯ ಶತಾಯುಷಿಯಷ್ಟೇ ಅಲ್ಲದೇ, ಮೂರು
ಶತಮಾನಗಳಲ್ಲಿ ( ೧೯,೨೦,೨೧ನೆಯ ಶತಮಾನಗಳು) ಬದುಕಿದ ಅತ್ಯಂತ ಅಪರೂಪದ ವ್ಯಕ್ತಿ.

ಮಂಡ್ಯ ಜಿಲ್ಲೆಯ "ಅಕ್ಕಿಹೆಬ್ಬಾಳು", ಅವರ ಜನ್ಮಸ್ಥಳ.

ತಂದೆ-ತಾಯಿಗಳು : ಶ್ರೀಮತಿ ಪುಟ್ಟಮ್ಮ, ಮತ್ತು ತಂದೆಯವರು, ಶ್ರೀ ಎ. ಸುಬ್ಬರಾವ್.

ಹೆಂಡತಿ- ಶ್ರೀಮತಿ ಜಯಲಕ್ಷ್ಮಿ, (ಮೂರ್ತಿರಾಯರ ರಚನೆಗಳಲ್ಲಿ 'ಲಲಿತೆ,' ಯೆಂದು ಸಂಬೋಧಿಸಲ್ಪಡುತ್ತಾರೆ.)

ಮಕ್ಕಳು : ೧. ಎ. ಎನ್. ಸುಬ್ಬರಾಮಯ್ಯ,೨. ಎ. ಎನ್. ನಾಗರಾಜ್,೩. ಎ. ಎನ್ ರಾಮಚಂದ್ರರಾವ್.

ವಿದ್ಯಾಭ್ಯಾಸ :
ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲುಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಎಂ. ಎ ; (ಇಂಗ್ಲೀಷ್ ಸಾಹಿತ್ಯದಲ್ಲಿ).

ವೃತ್ತಿ :
೧. ಮೈಸೂರಿನ ಮಹಾರಾಜಾ ಹೈಸ್ಕೂಲಿನಲ್ಲಿ ಉಪಾಧ್ಯಾಯವೃತ್ತಿ- ೧೯೨೫-೧೯೨೭ ೨. ಮೈಸೂರಿನ
ಮಹಾರಾಜಾ ಕಾಲೇಜಿನಲ್ಲಿ ಅಧ್ಯಾಪಕ-೧೯೨೭-೧೯೪೦ ೩. ಶಿವಮೊಗ್ಗದ ಇಂಟರ್ಮೀಡಿಯೆಟ್
ಕಾಲೇಜಿನಲ್ಲಿ ಉಪಪ್ರಾಧ್ಯಾಪಕ-೧೯೪೦-೧೯೪೩.

ಗೌರವಕೆಲಸಗಳು :
೧. ಕಾರ್ಯದರ್ಶಿ, ಕನ್ನಡಸಾಹಿತ್ಯ ಪರಿಷತ್ತು-೧೯೫೪ ೨. ಅಧ್ಯಕ್ಷ, ಕನ್ನಡ ಸಾಹಿತ್ಯ
ಪರಿಷತ್ತು-೧೯೫೪-೫೬ ೩. ಕೇಂದ್ರ ಸಾಹಿತ್ಯ ಅಕ್ಯಾಡಮಿಯ ಕನ್ನಡ ಸಲಹ ಸಮಿತಿಯ ಕನ್ವೀನರ್
ಛೇರ್ಮನ್ ೪. ದಕ್ಷಿಣ ಭಾಷಾ ಪುಸ್ತಕ ಟ್ರಸ್ಟ್ ನ ಕನ್ನಡ ಕನ್ವೀನರ್- ಛೇರ್ಮನ್ ೫.
ಭಾರತೀಯ ಆಕಾಶ್ ವಾಣಿ ಯ 'ಕೇಂದ್ರೀಯ ಕಾರ್ಯಕ್ರಮಗಳ ಸಲಹಾಕಮಿಟಿ', ಯ ಸದಸ್ಯರಾಗಿ ೪
ವರ್ಷಗಳಕಾಲ ಸೇವೆ.

ಪ್ರಬಂಧಗಳ ಮೂಲಕ ಇವರು ಕನ್ನಡ
ಸಾಹಿತ್ಯಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ೧೯೩೭ರಲ್ಲಿ ಇವರ ಮೊದಲ ಕೃತಿ
"ಹೂವುಗಳು"(ಪ್ರಬಂಧ ಸಂಕಲನ) ಪ್ರಕಟವಾಯಿತು. ಎಂಟು ಪ್ರಬಂಧಗಳ ಈ ಸಂಕಲನವು ಇಂದಿಗೂ
ಒಂದು ಮಾದರಿ ಕೃತಿಯಾಗಿದೆ. ವೈಚಾರಿಕ ನಾಸ್ತಿಕವಾದಿಯಾದ ರಾಯರ "ದೇವರು" ಎಂಬ ಕೃತಿಯು ಆಂಗ್ಲ ಭಾಷೆಗೆ ತರ್ಜುಮೆಯಾಗಿ ವಿಶ್ವಪ್ರಸಿಧ್ಧವಾಗಿದೆ.

ಅನುವಾದಗಳು :
•ಸಾಕ್ರೆಟೀಸನ ಕೊನೆಯ ದಿನಗಳು ( ಪ್ಲೇಟೋನ 'Enthyphro','Crito',Apology',Phaedo' - ಸಂವಾದಗಳ ಅನುವಾದ)
•ಹವಳದ ದ್ವೀಪ ( ಆರ.ಎಂ.ಬ್ಯಾಲಂಟಯಿನ್ ನ 'The Coral Island' ನ ಸಂಗ್ರಹಾನುವಾದ)
•ಯೋಧನ ಪುನರಾಗಮನ ( ಅನುವಾದಿತ ಕಥೆಗಳು)
•ಪಾಶ್ಚಾತ್ಯ ಸಣ್ಣ ಕಥೆಗಳು ( ಅನುವಾದಿತ ಕಥೆಗಳು)
•ಅಮೆರಿಕನ್ ಸಾಹಿತ್ಯ ಚರಿತ್ರೆ
•ಇಂಡಿಯ, ಇಂದು ಮತ್ತು ನಾಳೆ ( ಜವಹರಲಾಲ್ ನೆಹರೂರ 'India Today and Tomorrow' ಪುಸ್ತಕದ ಅನುವಾದ)
•ಚಂಡಮಾರುತ (ಷೇಕ್ ಸ್ಪಿಯರ್ ನ 'The Tempest' ಅನುವಾದ)=

ಲಲಿತ ಪ್ರಬಂಧಗಳು
•ಹಗಲುಗನಸುಗಳು
•ಮಿನುಗು ಮಿಂಚು
•ಅಲೆಯುವ ಮನ
•ಜನತಾ ಜನಾರ್ದನ
•ಸಮಗ್ರ ಲಲಿತ ಪ್ರಬಂಧಗಳು
•ಸಮಗ್ರ ಲಲಿತ ಪ್ರಬಂಧಗಳು (ವಿಸ್ತ್ರತ ಆವೃತ್ತಿ)

ರೂಪಾಂತರಗಳು
•ಆಷಾಢಭೂತಿ ( ಮೋಲಿಯರನ 'ತಾರ್ತುಫ್' ನಾಟಕದ ರೂಪಾಂತರ)

ವಿಮರ್ಶೆ
•ಷೇಕ್ ಸ್ಪಿಯರ್ - ಪೂರ್ವಭಾಗ
•ಮಾಸ್ತಿಯವರ ಕಥೆಗಳು
•ಪೂರ್ವ ಸೂರಿಗಳೊಡನೆ
•ಸಾಹಿತ್ಯ ಮತ್ತು ಸತ್ಯ
•ವಿಮರ್ಶಾತ್ಮಕ ಪ್ರಬಂಧಗಳು,

ಇತರ
•ಚಿತ್ರಗಳು ಪತ್ರಗಳು
•ಬಿ.ಎಂ.ಶ್ರೀಕಂಠಯ್ಯ (ವಿಮರ್ಶಾತ್ಮಕ ಜೀವನ ಚರಿತ್ರೆ)
•ಅಪರವಯಸ್ಕನ ಅಮೆರಿಕಾ ಯಾತ್ರೆ (ಪ್ರವಾಸ ಕಥನ)
•ಸಂಜೆಗಣ್ಣಿನ ಹಿನ್ನೋಟ ( ಆತ್ಮಚರಿತ್ರೆ)
•ದೇವರು ( ವಿಚಾರ)
•ಜನತಾ ಜನಾರ್ದನ ( ಲೇಖನಗಳು)
•ಗಾನ ವಿಹಾರ ( ಲೇಖನಗಳು)
•ಮಹಾಭಾರತದಲ್ಲಿ ಕೇಡು ಎಂಬುದರ ಸಮಸ್ಯೆ

ಪುರಸ್ಕಾರಗಳು
•೧೯೭೪ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

೧೯೭೭ ಮೈಸೂರು ವಿಶ್ವವಿದ್ಯಾನಿಲಯದ ಗೌರವ ಡಿ.ಲಿಟ್.

೧೯೭೮ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (ಅಪರವಯಸ್ಕನ ಅಮೆರಿಕಾ ಯಾತ್ರೆ)

೧೯೭೯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ( ಚಿತ್ರಗಳು ಪತ್ರಗಳು)

೧೯೮೧ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (ಚಂಡಮಾರುತ)

೧೯೮೪ ಅಧ್ಯಕ್ಷ ಪದ- ಕೈವಾರದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

೧೯೮೪ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

೧೯೯೪ ಪಂಪ ಪ್ರಶಸ್ತಿ

೧೯೯೯ ಮಾಸ್ತಿ ಪ್ರಶಸ್ತಿ

೧೯೯೯ ಭಾರತೀಯ ವಿದ್ಯಾ ಭವನದ ಫೆಲೋಶಿಪ್

ಈ ಮಾಹಿತಿ ಅಂತರ್ಜಾಲದಿಂದ (ವಿಕಿಪೀಡಿಯಾ) ಹೆಕ್ಕಿದ್ದು,

ಇದುವರೆಗೂ ಎಚ್.ನರಸಿಂಹಯ್ಯನವರ ಆತ್ಮಕಥನ "ಹೋರಾಟದ ಹಾದಿ" ಬಗ್ಗೆ ಬರೆದ ಲೇಖನ ಮಾಲೆಗೆ ಬಂದ ಪ್ರತಿಕ್ರಿಯೆಯ ಸ್ಪೂರ್ತಿಗೆ, ಮತ್ತು ನಿಮ್ಮೆಲ್ಲರ ಬೆಂಬಲಕ್ಕೆ ನನ್ನ ನುಡಿನಮನಗಳು.

ಇನ್ನೂ ನಾಳೆಯಿಂದ ಎ.ಎನ್. ಮೂರ್ತಿರಾವ್ ಅವರ "ದೇವರು" ಎಂಬ ವ್ಯೆಚಾರಿಕ ಕೃತಿಯಿಂದ ಒಂದೊಂದೆ ವಿಚಾರಗಳನ್ನು ಬರೆಯಲಿಚ್ಚಿಸುತ್ತೇನೆ. ಅದರಲ್ಲಿನ ವಿಚಾರಗಳ ಚರ್ಚೆಗೆ ನಾನು ಸದಾ ಸಿದ್ದ.